||ಪಲ್ಲವಿ||
ಮಧುವನ ಕರೆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೆ ...
||ಅನುಪಲ್ಲವಿ||
ಬಿರುಗಾಳಿಯಲ್ಲಿ ತೇಲಿ
ಹೊಸ ಘಳಿಗೆ ಬಂದಿದೆ
ಕನಸೊಂದು ಮೈಯ ಮುರಿದು
ಬಾ ಬಳಿಗೆ ಎಂದಿದೇ
ಶರಣಾಗು ಆದರೆ
ಸೆರೆ ಆಗು ಆದರೆ
||ಪಲ್ಲವಿ||
||ಚರಣ||1||
ಕಂಗಳಲಿ ಕನಸಿನ ಕುಲುಮೆ
ಹೊಳೆಯುತಿದೆ ಜೀವದ ಒಲುಮೆ
ಬೆಳಕಲ್ಲಿ ನೋಡು ಆದರೆ.......
ಮೈಯೆಲ್ಲಾ ಚಂದ್ರನ ಗುರುತು
ಹೆಸರೆಲ್ಲೊ ಹೋಗಿದೆ ಮರೆತು
ನಾನ್ಯಾರು ಹೇಳು ಆದರೆ
||ಪಲ್ಲವಿ||
||ಚರಣ||2||
ಮನಸಿನ ಹಸಿ ಬಣ್ಣಗಳಲ್ಲಿ
ನೀನೆಳೆವಾ ರೇಖೆಗಳಲ್ಲಿ
ನಾ ಮೂಡಬೇಕು ಆದರೇ.....
ಎದುರಿದ್ದು ಕರೆಯುವೆ ಏಕೆ
ಜೊತೆಯಿದ್ದು ಮರೆಯುವೆ ಏಕೆ
ನಿನ್ನೊಲವು ನಿಜವೆ ಆದರೆ.....
||ಪಲ್ಲವಿ||
||ಅನುಪಲ್ಲವಿ||
No comments:
Post a Comment